ಬೆಂಗಳೂರಿನಲ್ಲಿ ಇತ್ತೀಚಿಗೆ ನಡೆದ 'ದರೋಡೆ ಕೇಸ್' ಗೆ ಬಿಗ್ ಟ್ವಿಸ್ಟ್.. "ಮಾಸ್ಟರ್ ಮೈಂಡ್" ಪೊಲೀಸ್ ಕಾನ್ಸ್ಟೇಬಲ್ ಅರೆಸ್ಟ್!..

ಶುಕ್ರವಾರ 21 ನವೆಂಬರ್ 2025

  ಸಿನಿಮೀಯ  ಶೈಲಿಯಲ್ಲಿ ಹಾಡು  ಹಗಲೇ ದರೋಡೆ ! ಸಿಕ್ಕಿತಾ ಬಿಗ್ ಟ್ವಿಸ್ಟ್?!

ಬೆಂಗಳೂರಲ್ಲಿ 7 ಕೋಟಿ ರೂ ದರೋಡೆ ಕೇಸ್ಗೆ  ಬಿಗ್ ಟ್ವಿಸ್ಟ್ ಸಿಕ್ಕಿದ್ದು ಮಾಸ್ಟರ್ ಮೈಂಡ್ ಪೊಲೀಸ್ ಕಾನ್ಸ್ಟೇಬಲ್ ಅರೆಸ್ಟ್ ಆಗಿದ್ದಾರೆ .ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ .ಈ ದರೋಡೆಗೆ ಮಾಸ್ಟರ್ ಮೈಂಡ್ ಓರ್ವ ಪೊಲೀಸ್ ಕಾನ್ಸ್ಟೇಬಲ್ ಎಂಬ ಶಂಕೆ ವ್ಯಕ್ತವಾಗಿದೆ .

ಹೌದು ಈ ಕೇಸ್ ಸಂಬಂಧ ಗೋವಿಂದಪುರ ಠಾಣೆಯ ಕಾನ್ಸ್ಟೇಬಲ್ ಅಣ್ಣಪ್ಪ ನಾಯಕ್ ಎಂಬುವರನ್ನು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಅಣ್ಣಪ್ಪ ನಾಯ್ಕ ಇಡೀ ದರೋಡೆಯ "ಮಾಸ್ಟರ್ ಮೈಂಡ್" ಎಂದು ಹೇಳಲಾಗುತ್ತಿದೆ. ಈತ ರಾಬರಿ ಮಾಡಲು ಹುಡುಗರ ಗ್ಯಾಂಗ್ ರೆಡಿ ಮಾಡಿದ್ದನು. ಕಳ್ಳತನ ಹೇಗೆ ಮಾಡಬೇಕು? ಹೇಗೆ ತಪ್ಪಿಸಿಕೊಳ್ಳಬೇಕು ?ಎಂದು ಈತ ಹುಡುಗರಿಗೆ ಟ್ರೈನಿಂಗ್ ಕೂಡ ಕೊಟ್ಟಿದ್ದನು. ಈತನ ಪ್ಲಾನಂತೆ ಹುಡುಗರು 7.11 ಕೋಟಿ ದರೋಡೆ ಮಾಡಿದ್ದಾರೆ ಎನ್ನಲಾಗಿದೆ. ಸಿ ಎಮ್ ಎಸ್ ಸೆಕ್ಯೂರಿಟಿ ಏಜೆನ್ಸಿಯ ಮಾಜಿ ಉದ್ಯೋಗಿಗಳು ಕೂಡ ದರೋಡೆಗೆ ಸಾಥ್ ನೀಡಿದ್ದಾರೆ ಎನ್ನಲಾಗಿದೆ. ಪೊಲೀಸರು ಈ ಪ್ರಕರಣದ ತನಿಕೆಯನ್ನು ಚುರುಕುಗೊಳಿಸಿದ್ದು ಶೀಘ್ರವೇ ಎಲ್ಲಾ ಆರೋಪಿಗಳನ್ನು ಬಂಧಿಸಲಿದ್ದಾರೆ.  


Post a Comment